ಕೊಡಗಿನಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ!

ಕೊಡಗು (Kodagu) ಜಿಲ್ಲೆಯಲ್ಲಿ ಮಳೆಗಾಲ ಪ್ರಾರಂಭವಾಗಿದ್ದು, ಮುಂದಿನ ಮುಂಗಾರು ಮಳೆಗಾಲದ ದಿನಗಳಲ್ಲಿ ನದಿಪಾತ್ರಗಳಲ್ಲಿ ನೀರಿನ ಹರಿವು ಹೆಚ್ಚಾಗಲಿದ್ದು, ಸಾರ್ವಜನಿಕರ ಸುರಕ್ಷತೆಯ ಮತ್ತು ಸಾರ್ವಜನಿಕ ಆಸ್ತಿ ಪಾಸ್ತಿಗಳ ರಕ್ಷಣೆಯ ಹಿತದೃಷ್ಟಿಯಿಂದ ಮರಳುಗಾರಿಕೆ, ಮರದ ದಿಮ್ಮಿಗಳ ಸಾಗಾಣೆ ಮತ್ತು ಇತರೆ ಸರಕು ಸಾಗಾಣಿಕೆಯನ್ನು ಕೊಡಗು ಜಿಲ್ಲೆಯಾದ್ಯಂತ ಮಳೆಗಾಲ ಪ್ರಾರಂಭವಾದಾಗಿನಿಂದ ಮಳೆಗಾಲ ಮುಕ್ತಾಯವಾಗುವವರೆಗೆ ನಿರ್ಭಂಧಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಹೆಚ್ಚಾಗುವ ದಿನಗಳಲ್ಲಿ ರಸ್ತೆಯ ಪರಿಸ್ಥಿತಿ ಹದಗೆಡುತ್ತದೆಯಲ್ಲದೆ, ಅಧಿಕ ಭಾರ ತುಂಬಿದ ಭಾರೀ ಸರಕು ಸಾಗಾಣೆ ವಾಹನಗಳು ದಿನನಿತ್ಯ ಸಂಚರಿಸುವುದರಿಂದ ರಸ್ತೆಯ […]
ವಾಹನ ಸವಾರರೇ ಗಮನಿಸಿ: ಕೊಡಗಿನ ಈ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ

ಮಡಿಕೇರಿ (Madikeri) ಕುಟ್ಟ ಹೆದ್ದಾರಿ ಸಂ-89ರ ಕಿ.ಮೀ. 80.40 ರಲ್ಲಿನ (ಮಂಚಳ್ಳಿ ಗ್ರಾಮ, ಶ್ರೀಮಂಗಲ ಹೋಬಳಿ) ರಸ್ತೆ ಭಾಗದಲ್ಲಿ ಮಳೆಹಾನಿ ಕಾಮಗಾರಿ ಕೈಗೊಳ್ಳುವ ನಿಟ್ಟಿನಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಏಪ್ರಿಲ್, 08 ರಿಂದ ಮೇ, 10 ರವರೆಗೆ ಪೊನ್ನಂಪೇಟೆ ತಾಲ್ಲೂಕು ಮಡಿಕೇರಿ ಕುಟ್ಟ ಹೆದ್ದಾರಿ ಸಂ.89ರ ಕಿ.ಮೀ.80.40 ರಲ್ಲಿನ(ಮಂಚಳ್ಳಿ ಗ್ರಾಮ, ಶ್ರೀಮಂಗಲ ಹೋಬಳಿ) ರಸ್ತೆ ಮಾರ್ಗದಲ್ಲಿ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ರೀತಿಯ ವಾಹನಗಳ (Vehicle) ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ. […]