ಸಕಾಲ ಕಾಯ್ದೆಯಡಿ ಅರ್ಜಿ ಕಾಲಮಿತಿಯಲ್ಲಿ ಮಾಹಿತಿ ನೀಡಿ: ವೆಂಕಟ್ ರಾಜಾ

Sakala

ಮಡಿಕೇರಿ:- ವಿವಿಧ ಇಲಾಖೆಗೆ ಸಕಾಲ ಕಾಯ್ದೆಯಡಿ ಸಲ್ಲಿಕೆಯಾಗುವ ಅರ್ಜಿಗಳಿಗೆ ಕಾಲಮಿತಿಯಲ್ಲಿ ಮಾಹಿತಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಸಂಬಂಧ ಅಧಿಕಾರಿಗಳ ಜೊತೆ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾಹಿತಿ ಪಡೆದು ಅವರು ಮಾತನಾಡಿದರು. ಸಕಾಲ ಕಾಯ್ದೆಯಡಿ ಸಲ್ಲಿಕೆಯಾಗುವ ಅರ್ಜಿಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸಕಾಲದಲ್ಲಿ ಮಾಹಿತಿ ಒದಗಿಸಬೇಕು. ತಮ್ಮ ಹಂತದಲ್ಲಿ ಕೆಲಸ ಆಗದಿದ್ದಲ್ಲಿ ಹಿಂಬರಹವನ್ನಾದರೂ ನೀಡಬೇಕು, ಅದನ್ನು ಹೊರತುಪಡಿಸಿ ಸತಾಯಿಸುವುದು […]