“ಮನರೇಗಾ ಕನಸು ನನಸಾಯಿತು”: ಹೊಸ ಅಂಗನವಾಡಿಗೆ ಶಾಸಕ ಪೊನ್ನಣ್ಣ ಚಾಲನೆ

MLA Ponnanna

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ವಿರಾಜಪೇಟೆ (Virajpet) ತಾಲ್ಲೂಕಿನ ಕಾರ್ಮಾಡು ಗ್ರಾ.ಪಂ ( Karmadu Gram Panchayat)ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಅಂಗನವಾಡಿ ಕಟ್ಟಡವನ್ನು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್. ಪೊನ್ನಣ್ಣ (Ponnanna) ಅವರು ಉದ್ಘಾಟಿಸಿದರು. ಅಂಗನವಾಡಿ ಕೇಂದ್ರಗಳು ( Anganwadi Center) ಮಕ್ಕಳ ಪ್ರಾಥಮಿಕ ಹಂತದ ಶಿಕ್ಷಣ ಒದಗಿಸುವ ಒಂದು ಪ್ರಮುಖ ಕೇಂದ್ರಗಳಾಗಿದ್ದು, ಮಕ್ಕಳ ದೈಹಿಕ ಹಾಗೂ ಬೌದ್ದಿಕ ಬೆಳವಳಿಗೆಯು ಸಹ ಅಂಗನವಾಡಿ ಕೇಂದ್ರಗಳಿಂದಲೇ ಪ್ರಾರಂಭವಾಗುತ್ತವೆ. […]