ಕನ್ನಡ ಭಾಷೆಯ ಶ್ರೇಷ್ಠತೆ, ಪ್ರತಿಷ್ಠೆಯನ್ನು ಪ್ರತಿಯೊಬ್ಬ ಕನ್ನಡಿಗ ಅರಿತು ಬಾಳಬೇಕು – ಡಾ. ಹೇಮಂತ್ ಕುಮಾರ್

ವೀರಾಜಪೇಟೆ : ಪರಭಾಷೆಗಳ ವ್ಯಾಮೋಹದಿಂದ ಕನ್ನಡ ಭಾಷೆ ಶೋಚನೀಯ ಸ್ಥಿತಿಯನ್ನು ತಲುಪುತ್ತಿದೆ. ಕನ್ನಡಿಗರಿಗೆ ಭಾಷೆಯ ಶ್ರೇಷ್ಠತೆ, ಅನನ್ಯತೆ ಅರಿವಿಲ್ಲದಿರುವುದರಿಂದ ಈ ಪರಿಸ್ಥಿತಿ ಎದುರಾಗಿದೆ ಎಂದು ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಡಾ. ಹೇಮಂತ್ ಕುಮಾರ್ ಅಭಿಪ್ರಾಯಪಟ್ಟರು. ವೀರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕನ್ನಡ ನಾಡು ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿ ಹೋಗಿತ್ತು. ಅದನ್ನು ಏಕೀಕರಣಗೊಳಿಸಿದ ನೆನಪಿಗಾಗಿ ಹಾಗೂ ಮೈಸೂರು ರಾಜ್ಯವೆಂದಿದ್ದ ಹೆಸರನ್ನು ಕರ್ನಾಟಕವೆಂದು ಮರು […]
ವೀರಾಜಪೇಟೆಯಲ್ಲಿ ಗೋಮಾಂಸ ಮಾರಾಟ – ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು..!

ವೀರಾಜಪೇಟೆ : ಗೋಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿರಾಜಪೇಟೆ ವಿಜಯ ನಗರ ನಿವಾಸಿಗಳಾದ ಮೊಹಮ್ಮದ್ ಎಂಬವರ ಪುತ್ರ ಎಂ.ಎಂ. ಮುಸ್ತಾಫ(42), ಮೊಹಮ್ಮದ್ ಹುಸೈನ್ ಎಂಬವರ ಪುತ್ರ ಎಂ.ಎಸ್. ತನ್ವಿರ್(41) ಗೋಮಾಂಸ ಮಾರಾಟಕ್ಕೆ ಮುಂದಾಗಿ ಪೊಲೀಸರ ವಶಕ್ಕೆ ಸಿಕ್ಕವರು. ಇಬ್ಬರು ಸೇರಿಕೊಂಡು ವೀರಾಜಪೇಟೆಯ ವಿವಿಧೆಡೆ ಗೋಮಾಂಸ ಮಾರಾಟಕ್ಕೆ ಮುಂದಾಗಿದ್ದರು ಎಂದು ತಿಳಿದುಬಂದಿದೆ. ಈ ಬಗ್ಗೆ ನಿಖರ ಮಾಹಿತಿ ಪಡೆದ ಪೊಲೀಸರು ದಾಳಿ ಮಾಡಿ ಇಬ್ಬರನ್ನು ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಂಡಿದ್ದಾರೆ.
ಮದುವೆ ಕಾರ್ಯಕ್ರಮದಲ್ಲಿ ಜೂಜಾಟ – ಪೊಲೀಸರ ದಾಳಿ – ವಶಪಡಿಸಿಕೊಂಡ ಹಣ ಎಷ್ಟು ಗೊತ್ತಾ..!?

ವೀರಾಜಪೇಟೆ : ವಿವಾಹ ಸಮಾರಂಭದಲ್ಲಿ ಜೂಜಾಟದಲ್ಲಿ ತೊಡಗಿದ್ದ ಸಂದರ್ಭ ಪೊಲೀಸರು ದಾಳಿ ನಡೆಸಿ ಜೂಜಿಗೆ ಬಳಸಿದ್ದ ಹಣವನ್ನು ವಶಪಡಿಸಿಕೊಂಡಿದ್ದಾರೆ. ಮೊಗರಗಲ್ಲಿರುವ ಕಲ್ಯಾಣ ಮಂಟಪದಲ್ಲಿ ಮದುವೆ ಕಾರ್ಯವಿತ್ತು. ಮಂಟಪದಲ್ಲಿನ ಕೊಠಡಿಯೊಂದರಲ್ಲಿ ಮದುವೆಗೆ ಬಂದಿದ್ದ ಕೆಲವರು ಹಣ ಪಣಕ್ಕಿಟ್ಟು ಜೂಜಾಟದಲ್ಲಿ ತೊಡಗಿದ್ದರು. ಮಾಹಿತಿ ಅರಿತ ಪೊಲೀಸರು ಕಲ್ಯಾಣ ಮಂಟಪದ ಕೊಠಡಿಯ ಮೇಲೆ ದಾಳಿ ನಡೆಸಿ, ಜೂಜಾಟದಲ್ಲಿ ತೊಡಗಿದ್ದ ವ್ಯಕ್ತಿಗಳಿಂದ ಒಟ್ಟು 4,25,545/ ರೂ. ವಶಕ್ಕೆ ಪಡೆದಿದ್ದಾರೆ. ಜೂಜಾಟದಲ್ಲಿ ತೊಡಗಿದ್ದ 8 ಮಂದಿಯ ಮೇಲೆ ವಿರಾಜಪೇಟೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು […]
ಕನ್ನಡಪ್ರಭ ಪತ್ರಿಕೆ ವತಿಯಿಂದ ಪೊನ್ನಂಪೇಟೆ, ವೀರಾಜಪೇಟೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ – ಉತ್ಸಾಹದಿಂದ ಪಾಲ್ಗೊಂಡ ನೂರಕ್ಕೂ ಅಧಿಕ ವಿದ್ಯಾರ್ಥಿಗಳು

ವಿರಾಜಪೇಟೆ : ಮಕ್ಕಳ ಪ್ರತಿಭೆ ಅನಾವರಣಕ್ಕೆ ಚಿತ್ರಕಲೆಯಂತಹ ಸ್ಪರ್ಧಾ ಕಾರ್ಯಕ್ರಮಗಳು ಅವಶ್ಯಕವಾಗಿದೆ. ತೀರಾ ಬಡತನದಲ್ಲಿ ಬೆಳೆದು ಬಂದವರು ಇಂದು ಸಾಕಷ್ಟು ಸಾಧನೆ ಮಾಡಿದ್ದಾರೆ. ಅವರಂತೆ ವಿದ್ಯಾರ್ಥಿಗಳು ಸಾಧನೆ ಮಾಡಬೇಕೆಂದು ಲಿಟಲ್ ಸ್ಕಾಲರ್ಸ್ ಅಕಾಡೆಮಿ ಅಧ್ಯಕ್ಷ ಪೂಜಾ ಸಜೇಶ್ ಹೇಳಿದರು. ಕನ್ನಡಪ್ರಭ ಪತ್ರಿಕೆ ವತಿಯಿಂದ ವಿರಾಜಪೇಟೆಯ ಲಿಟಲ್ ಸ್ಕಾಲರ್ಸ್ ಅಕಾಡೆಮಿ ಹಾಗೂ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ಗುರುವಾರ ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕಿನ ವಿದ್ಯಾರ್ಥಿಗಳಿಗೆ ನಡೆದ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು. […]
Power Cut: ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!

ವಿರಾಜಪೇಟೆ 66/11 ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರದ ವಿರಾಜಪೇಟೆ ಶಾಖಾ ವ್ಯಾಪ್ತಿಯ ಪಂಜರಪೇಟೆ ಹಾಗೂ ಹೆಗ್ಗಳ ಫೀಡರ್ಗಳಲ್ಲಿ ನವೆಂಬರ್, 06 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ, ವಿರಾಜಪೇಟೆ ಪಟ್ಟಣದ ತೆಲುಗರ ಬೀದಿ, ನೆಹರು ನಗರ, ಗೋಣಿಕೊಪ್ಪ ರಸ್ತೆ, ಶಾಂತಿ ನಗರ, ವಿದ್ಯಾನಗರ, ನಿಸರ್ಗ ಬಡಾವಣೆ, ಮೀನುಪೇಟೆ, ಖಾಸಗಿ ಬಸ್ ನಿಲ್ದಾಣ, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ಆರ್ಜಿ, ಬೇಟೋಳಿ, ಕಲ್ಲುಬಾಣೆ, ಹೆಗ್ಗಳ, ರಾಮನಗರ, ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸೋಮವಾರಪೇಟೆ 66/11 […]
NSS ವಿದ್ಯಾರ್ಥಿಗಳಿಂದ ಜಾಗೃತಿ ಕಾರ್ಯಕ್ರಮ

ವಿರಾಜಪೇಟೆ : ರಾಜ್ಯ ಸರ್ಕಾರವು ರಾಜ್ಯಾದ್ಯಂತ ಸಾಮಾಜಿಕ ಹಾಗೂ ಶೈಕ್ಷಣಿಕ ಗಣತಿಯನ್ನು ಮಾಡುತ್ತಿದ್ದು, ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ಸ್ವಯಂ ಸೇವಕರು ಗಣತಿಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸಿದರು. ವಿರಾಜಪೇಟೆಯ ಪುರಸಭಾ ವ್ಯಾಪ್ತಿಯ ಚರ್ಚ್ ಸ್ಟ್ರೀಟ್, ಜನರಲ್ ತಿಮ್ಮಯ್ಯ ಬಡಾವಣೆ, ಹಾಗೂ ಅಪ್ಪಯ್ಯ ಸ್ವಾಮಿ ರಸ್ತೆಯ ಮನೆಗಳಿಗೆ ತೆರಳಿ ವಿದ್ಯಾರ್ಥಿಗಳು ಸಾರ್ವಜನಿಕರಲ್ಲಿ ಗಣತಿಯ ಕುರಿತು ಜಾಗೃತಿಯನ್ನು ಮೂಡಿಸಿದರು. ಎನ್ಎಸ್ಎಸ್ ಸ್ವಯಂಸೇವಕರು ವಿವಿಧ ಗುಂಪುಗಳಾಗಿ ವಿಂಗಡಿಸಿ ಪ್ರತ್ಯೇಕವಾಗಿ ಮನೆಮನೆಗಳಿಗೆ ತೆರಳಿ ಜಾಗೃತಿಯನ್ನು […]
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಿ: ಎ.ಎಸ್.ಪೊನ್ನಣ್ಣ

ಸರ್ಕಾರದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ, ಮೀಸಲಾತಿ ಹಾಗೂ ಸರ್ಕಾರದ ಕಾರ್ಯಕ್ರಮ ರೂಪಿಸಲು ಈ ಸಮೀಕ್ಷೆ ನಡೆಸಲಾಗುತ್ತಿದೆ. ಆ ದಿಸೆಯಲ್ಲಿ ಸಮೀಕ್ಷೆಯಲ್ಲಿ ಎಲ್ಲರೂ ಪಾಲ್ಗೊಳ್ಳುವಂತೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮನವಿ ಮಾಡಿದ್ದಾರೆ. ನಗರದ ಸುದರ್ಶನ ಅತಿಥಿ ಗೃಹದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಶಾಸಕರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸಂಬಂಧಿಸಿದಂತೆ ಅಪಪ್ರಚಾರ ಮಾಡುತ್ತಿದ್ದು, ರಾಜಕೀಯ ಪ್ರೇರಿತವಾಗಿದೆ ಎಂದರು. […]
ವಿರಾಜಪೇಟೆಯ ಲಾವಣ್ಯಗೆ ಕಲಾನಿಧಿ ರಾಷ್ಟ್ರೀಯ ಪ್ರಶಸ್ತಿ

ವಿರಾಜಪೇಟೆ: ವಿರಾಜಪೇಟೆಯ ಭರತನಾಟ್ಯ ಕಲಾವಿದೆ ಬಿ. ಎನ್. ಲಾವಣ್ಯ ಬೋರ್ಕಾರ್ಗೆ ಕಲಾನಿಧಿ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಟ್ರಸ್ಟ್ (ರಿ ) ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ಜರುಗಿದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಲಾವಣ್ಯ ರವರ ಭರತನಾಟ್ಯದಲ್ಲಿನ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಸಾವಿತ್ರಿ ಬಾಯಿ ಪುಲೆ ಶಿಕ್ಷಕಿಯರ ಸಂಘದ ಸಂಸ್ಥಾಪಕ […]
ಹೆಸರಿಗೆ ಬ್ಯೂಟಿ ಪಾರ್ಲರ್, ಮಸಾಜ್ ಸೆಂಟರ್ – ಆದ್ರೆ ಅಲ್ಲಿ ಆಗುತ್ತಿದ್ದ ಮಸಾಜ್ ಬೇರೆಯದ್ದೇ..!

ವೀರಾಜಪೇಟೆ : ಬ್ಯೂಟಿ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಕೇರಳದ ಕಣ್ಣೂರು ಜಿಲ್ಲೆಯ ಪ್ರದೀಪನ್ ಮತ್ತು ಶಿಜು ಬಂಧಿತರು. ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಡಿ ಇಬ್ಬರ ವಿರುದ್ಧ ವೀರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಂಧಿನಗರದಲ್ಲಿ ಖಾಸಗಿ ಕಟ್ಟಡವೊಂದನ್ನು ಬಾಡಿಗೆಗೆ ಪಡೆದಿದ್ದ ಇಬ್ಬರು ಆರೇಂಜ್ ಫ್ಯಾಮಿಲಿ ಬ್ಯೂಟಿ ಪಾರ್ಲರ್ ಮತ್ತು ಸ್ಪಾ ಸೆಂಟರ್ ನಡೆಸುತಿದ್ದರು. ಆದರೆ ಅಲ್ಲಿ ಬೇರೆಯದ್ದೇ ಚಟುವಟಿಕೆ ಆಗುತ್ತಿರುವ ಬಗ್ಗೆ ಸಾರ್ವಜನಿಕರಲ್ಲಿ ಅನುಮಾನ ಇತ್ತು. ಕೆಲವರು ಐಶಾರಾಮಿ ಕಾರಿನಲ್ಲಿ ಬಂದು […]
ರಾಜ್ಯಮಟ್ಟದ ಸಾಹಿತ್ಯ ಸ್ಪರ್ಧೆಗೆ ವೀರಾಜಪೇಟೆಯ ಮುಹಮ್ಮದ್ ಅಶ್ಹದ್ ಆಯ್ಕೆ

ವೀರಾಜಪೇಟೆ : ಎಸ್ಎಸ್ಎಫ್ ಜಿಲ್ಲಾ ಘಟಕ ವತಿಯಿಂದ ಕಡಂಗದಲ್ಲಿ ಇತ್ತೀಚೆಗೆ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ ನಡೆಯಿತು. ಜೂನಿಯರ್ ವಿಭಾಗದ ಕನ್ನಡ ಕಥೆ ಹೇಳುವ ಸ್ಪರ್ಧೆಯಲ್ಲಿ ಕಲ್ಲುಬಾಣೆಯ ಮುಹಮ್ಮದ್ ಅಶ್ಹದ್ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಈತ ಕಲ್ಲುಬಾಣೆಯ ಹ್ಯಾರಿಸ್, ಅಮೀನ ದಂಪತಿಯ ಪುತ್ರ. ರಾಜ್ಯಮಟ್ಟದ ಸ್ಪರ್ಧೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ತುರ್ಕಳಿಕೆಯಲ್ಲಿ ಸೆ.26ರಿಂದ 28ರವರೆಗೆ ನಡೆಯಲಿದೆ.