ವೀರಾಜಪೇಟೆ ಸೆಂಟ್ ಆನ್ಸ್ ಕಾಲೇಜಿನಲ್ಲಿ ಎಂ.ಕಾಂ ಪ್ರವೇಶಾತಿ ಆರಂಭ

ವೀರಾಜಪೇಟೆ : ವೀರಾಜಪೇಟೆಯ ಸೆಂಟ್ ಆನ್ಸ್ ಕಾಲೇಜಿನಲ್ಲಿ ಎಂ.ಕಾಂ. ಸ್ನಾತಕೋತ್ತರ ವಿಭಾಗಕ್ಕೆ 2025 -26ನೇ ಸಾಲಿಗೆ ಪ್ರವೇಶಾತಿ ಆರಂಭವಾಗಿದೆ. ನುರಿತ ಉಪನ್ಯಾಸಕರು, ಸುಸಜ್ಜಿತ ಕೊಠಡಿ, ಐಸಿಟಿ ತರಗತಿ, ಗ್ರಂಥಾಲಯ ವ್ಯವಸ್ಥೆ, ವೈಫೈ, ಕೆ ಸೆಟ್ ಹಾಗೂ ನೆಟ್ ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತಿದೆ. ಜೊತೆಗೆ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣಗಳಲ್ಲಿ ವಿಚಾರ ಮಂಡನೆ, ಇಂಡಸ್ಟ್ರಿಯಲ್ ವಿಸಿಟ್, ಹಾಗೂ ಇಂಟರ್ನ್ಶಿಪ್, ಬೋಧನಾ ಕೌಶಲ್ಯ ತರಬೇತಿ, ಸೆಮಿನಾರ್, ಫೆಸ್ಟ್ಗಳಲ್ಲಿ ಪಾಲ್ಗೊಳ್ಳುವಿಕೆ, ಹಾಗೂ ಪ್ರಾಯೋಗಿಕ ತರಬೇತಿಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. […]
ಎನ್ಎಸ್ಎಸ್ಗೆ ಸಾಮಾನ್ಯ ವ್ಯಕ್ತಿತ್ವವನ್ನು ವಿಶೇಷ ವ್ಯಕ್ತಿತ್ವವನ್ನಾಗಿ ಮಾರ್ಪಡಿಸುವ ಶಕ್ತಿ ಇದೆ – ಡಾ.ಕೆ.ಸಿ. ದಯಾನಂದ

ವೀರಾಜಪೇಟೆ(Virajpet) : ವ್ಯಕ್ತಿತ್ವ ವಿಕಸನದೊಂದಿಗೆ ಸಮಾಜದಲ್ಲಿ ವಿಶೇಷವಾದ ಸ್ಥಾನಮಾನ ಪಡೆಯುವುದರೊಂದಿಗೆ ಸಹಕಾರ ಮನೋಭಾವನೆ ಬೆಳೆಸಲು ಎನ್.ಎಸ್.ಎಸ್(NSS) ಸಹಕಾರಿ ಎಂದು ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಹಾಗೂ ಕೊಡಗು ವಿಶ್ವವಿದ್ಯಾಲಯದ ಎನ್ಎಸ್ಎಸ್ ನೋಡಲ್ ಅಧಿಕಾರಿ ಡಾ.ಕೆ.ಸಿ. ದಯಾನಂದ ಅಭಿಪ್ರಾಯಪಟ್ಟರು. ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಮಂಗಳವಾರ ನಡೆದ ಎನ್.ಎಸ್.ಎಸ್ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಸಮಾಜ ಸೇವೆಯ ಮನೋಭಾವವನ್ನು ಬೆಳೆಸುವುದರೊಂದಿಗೆ ಸಮಸ್ಯೆ ಬಗೆಹರಿಸಲು ಹೇಗೆ ಒಗ್ಗೂಡಬೇಕು […]
ನಾಳೆ ಕೊಡಗಿನಲ್ಲಿ ಎಲ್ಲೆಲ್ಲಿ ಕರೆಂಟ್ ಇರಲ್ಲ?

ವಿರಾಜಪೇಟೆ ವಿದ್ಯುತ್ ವಿತರಣಾ ಉಪಕೇಂದ್ರದ ವಿರಾಜಪೇಟೆ ಶಾಖಾ ವ್ಯಾಪ್ತಿಯ ವಿಎಫ್-3 ಕೆ.ಎಸ್.ಆರ್.ಟಿ.ಸಿ ಮತ್ತು ವಿಎಫ್-7 ಹೆಗ್ಗಳ ಫೀಡರ್ಗಳಲ್ಲಿ ಸೆಪ್ಟೆಂಬರ್, 11 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಫೀಡರ್ ಬೇರ್ಪಡಿಸುವ ಕಾರ್ಯ ಕೈಗೆತ್ತಿಕೊಂಡಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ವಿರಾಜಪೇಟೆ ಪಟ್ಟಣದ ಮೀನುಪೇಟೆ, ಸುಣ್ಣದ ಬೀದಿ, ಖಾಸಗಿ ಬಸ್ ನಿಲ್ದಾಣ, ಪೋಲಿಸ್ ಸ್ಠೇಷನ್ ಹಿಂಬಾಗ, ಆರ್ಜಿ, ಪೆರಂಬಾಡಿ, ಹೆಗ್ಗಳ, ತೋರ, ರಾಮನಗರ, ಬಟ್ಟಮಕ್ಕಿ, ಎಡಮಕ್ಕಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು […]
ವೀರಾಜಪೇಟೆ ಗಣೇಶೋತ್ಸವ – ನಿಯಮ ಮೀರಿ ಅಬ್ಬರದ ಸಂಗೀತ/ಡಿಜೆ ಬಳಕೆ – 16 ಪ್ರಕರಣ ದಾಖಲು

ವೀರಾಜಪೇಟೆ(Virajpet) : ಜಿಲ್ಲೆಯಲ್ಲಿ ವಿಜೃಂಭಣೆಯಿಂದ ಸಾಮೂಹಿಕವಾಗಿ ಗಣೇಶೋತ್ಸವ ಆಚರಿಸಲಪಡುವ ವೀರಾಜಪೇಟೆಯಲ್ಲಿ ಮೂರ್ತಿಗಳ ಮೆರವಣಿಗೆ ಹಾಗೂ ವಿಸರ್ಜನಾ ಕಾರ್ಯ ಶನಿವಾರ(saturday) ರಾತ್ರಿ ವೈಭವದಿಂದ ನೆರವೇರಿದೆ. ಈ ನಡುವೆ ಕಾನೂನು ಉಲ್ಲಂಘನೆ ಸಂಬಂಧ ಪ್ರಕರಣ ಕೂಡಾ ದಾಖಲಾಗಿದೆ. ಗಣೇಶೋತ್ಸವದಲ್ಲಿ ನಿಯಮ ಮೀರಿ ಧ್ವನಿವರ್ದಕ/ಡಿಜೆ(dj) ಬಳಸದಂತೆ ಜಿಲ್ಲಾ ಪೊಲೀಸ್ ಇಲಾಖೆ ಮೊದಲೇ ಎಚ್ಚರಿಕೆ ನೀಡಿತ್ತು. ಆದರೆ ವೀರಾಜಪೇಟೆ ಗಣೇಶೋತ್ಸವ ಮೆರವಣಿಗೆಯಲ್ಲಿ ನಿಯಮ ಮೀರಿ ಅಬ್ಬರದ ಸಂಗೀತ ಬಳಸಲಾಗಿದ್ದು, ಈ ಸಂಬಂಧ 16 ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ. ಗಣೇಶೋತ್ಸವ […]
ಕೊಡಗಿನಲ್ಲಿ ಮದ್ಯ ಮಾರಾಟ ನಿಷೇಧ: ಯಾವಾಗ? ಎಲ್ಲೆಲ್ಲಿ?

ಮಡಿಕೇರಿ ನಗರದಲ್ಲಿ ಹಾಗೂ ವಿರಾಜಪೇಟೆ ನಗರದಲ್ಲಿ ಗೌರಿ-ಗಣೇಶ ಮೂರ್ತಿಗಳ ವಿಸರ್ಜನಾ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ 1965ರ ಕಲಂ 21 ರಲ್ಲಿ ದತ್ತವಾದ ಅಧಿಕಾರದಂತೆ ಆಗಸ್ಟ್, 29 ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮಡಿಕೇರಿ ನಗರದ ವ್ಯಾಪ್ತಿಯಲ್ಲಿ, ಸೆಪ್ಟೆಂಬರ್, 06 ರಂದು ಬೆಳಗ್ಗೆ 6 ಗಂಟೆಯಿಂದ ಸೆಪ್ಟೆಂಬರ್, 07 ರ ಬೆಳಗ್ಗೆ 10 ಗಂಟೆಯವರೆಗೆ ವಿರಾಜಪೇಟೆ ನಗರ ಹಾಗೂ ಅದರ ಸುತ್ತಮುತ್ತಲಿನ ಸುಮಾರು […]
ಗಣೇಶೋತ್ಸವಕ್ಕೆ ಸಜ್ಜಾದ ವೀರಾಜಪೇಟೆ : ಪಟ್ಟಣದ 22 ಕಡೆ ವಿನಾಯಕ ಮೂರ್ತಿ ಪ್ರತಿಷ್ಟಾಪನೆ..!

ವೀರಾಜಪೇಟೆ : ಕೊಡಗು ಜಿಲ್ಲೆಯಲ್ಲಿ ಹೆಚ್ಚು ಜನಪ್ರಿಯತೆ, ಆಕರ್ಷಣೆ ಪಡೆದಿರುವುದು ವೀರಾಜಪೇಟೆಯ ಸಾಮೂಹಿಕ ಗಣೇಶೋತ್ಸವ. ಹಲವು ಕಾರಣದಿಂದಾಗಿ ಇದು ಜನಾಕರ್ಷಣೆಯ ಕೇಂದ್ರವಾಗಿದೆ. ಈ ಬಾರಿಯ ಉತ್ಸವಕ್ಕೆ ಪಟ್ಟಣ ಸಜ್ಜಾಗಿದ್ದು, ಅಂತಿಮ ಹಂತದ ತಯಾರಿ ಭರದಿಂದ ಸಾಗಿದೆ. ಈ ಬಾರಿ 22 ಕಡೆಗಳಲ್ಲಿ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗುತ್ತಿದೆ. ಐತಿಹಾಸಿಕ ಹಿನ್ನೆಲೆಯುಳ್ಳ ಈ ಆಚರಣೆ 200 ವರ್ಷಗಳಿಂದ ನಡೆದುಕೊಂಡು ಬಂದಿದೆ. ಸೆಪ್ಟೆಂಬರ್ 6 ರಂದು ರಾತ್ರಿ ಶೋಭಾಯಾತ್ರೆ ನಡೆಯಲಿದ್ದು, 7 ರಂದು ನಸುಕಿನ ಜಾವ ಗೌರಿ ಕೆರೆಯಲ್ಲಿ ವಿಸರ್ಜನೆ ನಡೆಯಲಿದೆ. ಈ […]
ವಿರಾಜಪೇಟೆ ಸ್ನೇಹಿತರ ಒಕ್ಕೂಟದಿಂದ ಹೆಗ್ಗಳ ಸರ್ಕಾರಿ ಶಾಲಾ ಮಕ್ಕಳಿಗೆ ಟೈ, ಬೆಲ್ಟ್ ವಿತರಣೆ

ಸ್ನೇಹಿತರ ಒಕ್ಕೂಟ ವಿರಾಜಪೇಟೆ (Virajpet) ವತಿಯಿಂದ ವಿರಾಜಪೇಟೆಯ ಹೆಗ್ಗಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಅಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸರಿಸುಮಾರು 25 ಮಕ್ಕಳಿಗೆ ಟೈ ,ಬೆಲ್ಟ್ ಹಾಗೂ ಶಿಕ್ಷಕರಿಗೆ ಟೇಬಲ್ ನೀಡುವ ಮೂಲಕ ಉತ್ತಮ ಗುಣಮಟ್ಟದ ವಿದ್ಯಾಭ್ಯಾಸಕ್ಕೆ ಸಹಾಯ ಮಾಡಿರುತ್ತಾರೆ ಇವರ ಈ ಕಾರ್ಯ ಸಾರ್ವಜನಿಕರಲ್ಲಿ ಉತ್ತಮ ಮೆಚ್ಚುಗೆ ವ್ಯಕ್ತವಾಗುತ್ತಿದ್ದು ಸ್ನೇಹಿತರ ಒಕ್ಕೂಟ ಪ್ರಮುಖರಿಗೆ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಅಧ್ಯಾಪಕರೆಲ್ಲ ಸೇರಿ ತುಂಬು ಹೃದಯದ ಧನ್ಯವಾದಗಳು ಸಲ್ಲಿಸಿದರು. ಈ ಸಂದರ್ಭದಲ್ಲಿ ಸ್ನೇಹಿತರ ಒಕ್ಕೂಟ ಪ್ರಮುಖರಾದ […]
ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಗ್ರಂಥಪಾಲಕರ ದಿನಾಚರಣೆ

ಗ್ರಂಥಾಲಯಗಳು ಜ್ಞಾನಾರ್ಜನೆಯ ಪ್ರಮುಖ ತಾಣವಾಗಿದ್ದು. ಸಮಾಜದ ಪ್ರಗತಿಗೆ ಹಾಗೂ ಪ್ರತಿ ಓದುಗರ ಬೆಳವಣಿಗೆಗೆ ಗ್ರಂಥಾಲಯ ಬಹಳ ಮುಖ್ಯ ಪಾತ್ರ ವಹಿಸುತ್ತದೆ ಎಂದು ವಿರಾಜಪೇಟೆ (Virajpet) ಕಾವೇರಿ ಕಾಲೇಜಿನ (Cauvery College) ಪ್ರಾಂಶುಪಾಲರಾದ ಬೆನೆಡಿಕ್ಟ್ ಆರ್ ಸಲ್ದಾನ ಅಭಿಪ್ರಾಯ ವ್ಯಕ್ತಪಡಿಸಿದರು. ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ಆಚರಿಸಲಾದ ಭಾರತದ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್ ರಂಗನಾಥನ್ ರವರ 133 ನೇ ಜನ್ಮ ದಿನಾಚರಣೆ ಉದ್ದೇಶಿಸಿ ಮಾತನಾಡಿದ ಅವರು ಪ್ರತಿವರ್ಷ ಆಗಸ್ಟ್ 12ರಂದು ಗ್ರಂಥಪಾಲಕರ ದಿನಾಚರಣೆ ಮಾಡುತ್ತಾ ಬಂದಿದ್ದೇವೆ. ಇಂದಿನ ಡಿಜಿಟಲ್ ಯುಗದಲ್ಲಿಯೂ […]
ಕೊಡವ ಸಂಸ್ಕೃತಿ, ಕಲೆಗಳ ಶ್ರೀಮಂತಿಕೆಗೆ ಎಲ್ಲೆಡೆ ಗೌರವ: ಎ.ಎಸ್.ಪೊನ್ನಣ್ಣ

ಮಡಿಕೇರಿ:- ಕೊಡಗಿನ ಪೂರ್ವಜರು ಉಳಿಸಿ ಬೆಳೆಸಿಕೊಂಡು ಬಂದಿರುವ ಕೃಷಿ ಪದ್ಧತಿ, ಸಂಸ್ಕೃತಿ, ಕಲೆ, ಪರಂಪರೆಗಳನ್ನು ಇಂದಿನ ಯುವಜನರು ಮರೆಯದೆ ಮುಂದುವರಿಸಿಕೊಂಡು ಹೋಗುವಂತಾಗಬೇಕು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಕರೆ ನೀಡಿದ್ದಾರೆ. ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಬಿದ್ದಾಟಂಡ ಕುಟುಂಬ, ನಾಲ್ಕುನಾಡು ಪ್ಲಾಂಟರ್ಸ್ ಕ್ಲಬ್ ಅಸೋಸಿಯೇಷನ್ ಮತ್ತು ಕೊಡವ ಸಮಾಜ ಸಂಸ್ಕøತಿ ಮತ್ತು ಕ್ರೀಡಾ ಅಸೋಷಿಯೇಷನ್ ಇವರ ವತಿಯಿಂದ ನಾಪೋಕ್ಲುವಿನ ಬಿದ್ದಾಟಂಡ ಕುಟುಂಬಸ್ಥರ ಗದ್ದೆಯಲ್ಲಿ ಗುರುವಾರ […]
Power Cut: ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ !

66/33/11 ಕೆ.ವಿ ವಿರಾಜಪೇಟೆ ವಿದ್ಯುತ್ ವಿತರಣಾ ಉಪ ಕೇಂದ್ರದ ವಿರಾಜಪೇಟೆ ಶಾಖಾ ವ್ಯಾಪ್ತಿಯ ವಿಎಫ್-3 ಕೆ.ಎಸ್.ಆರ್.ಟಿ.ಸಿ ಮತ್ತು ವಿಎಫ್-7 ಹೆಗ್ಗಳ ಫೀಡರ್ಗಳಲ್ಲಿ ಆಗಸ್ಟ್, 05 ರಂದು ಬೆಳಗ್ಗೆ 9.30 ರಿಂದ ಸಂಜೆ 5.30 ಗಂಟೆಯವರೆಗೆ ಈ ಫೀಡರ್ಗಳ ಬೇರ್ಪಡಿಸುವ ಕಾರ್ಯ ಕೈಗೆತ್ತಿಕೊಂಡಿರುವುದರಿಂದ ಸದರಿ ಫೀಡರ್ನಿಂದ ಹೊರಹೊಮ್ಮುವ ವಿರಾಜಪೇಟೆ ಪಟ್ಟಣದ ದೊಡ್ಡಟ್ಟಿ ಚೌಕಿಯಿಂದ ಪ್ರೈವೇಟ್ ಬಸ್ ನಿಲ್ದಾಣದವರೆಗೆ(ದರ್ಶನ್ ಲಾಡ್ಜ್ ಪರಿವರ್ತಕ, ಅಭಿಲಾಷ್ ಸ್ಟೋರ್, ಬದ್ರಿಯಾಸ್ ಪಳ್ಳಿ, ಮಮತಾ ಲಾಡ್ಜ್, ಮತ್ತು ಪ್ರೈವೇಟ್ ಬಸ್ನಿಲ್ದಾಣದ ಪರಿವರ್ತಕಗಳಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ […]