ವಾಲಿಬಾಲ್ ಕ್ರೀಡೆಯ ಉತ್ತೇಜನಕ್ಕೆ ಯೋಜನೆ ರೂಪಿಸಿ: ಶಾಸಕ ಪೊನ್ನಣ್ಣ

ಪೊನ್ನಂಪೇಟೆ: ಕೊಡಗು ಜಿಲ್ಲೆಯಲ್ಲಿ ಸಾಕಷ್ಟು ವಾಲಿಬಾಲ್ ಕ್ರೀಡಾಪಟುಗಳಿದ್ದಾರೆ. ವಾಲಿಬಾಲ್ ಕ್ರೀಡೆಗೆ ಜಿಲ್ಲೆಯ ಕ್ರೀಡಾಪಟುಗಳ ಕೊಡುಗೆ ಅಪಾರವಾಗಿದೆ. ಆದ್ದರಿಂದ ಜಿಲ್ಲೆಯಲ್ಲಿ ವಾಲಿಬಾಲ್ ಕ್ರೀಡೆಯನ್ನು ಮತ್ತಷ್ಟು ಉತ್ತೇಜಿಸಲು ಸೂಕ್ತವಾದ ಕಾರ್ಯ ಯೋಜನೆಗಳನ್ನು ರೂಪಿಸುವಂತೆ ವಿರಾಜಪೇಟೆ ಶಾಸಕರು ಮತ್ತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಸಲಹೆ ನೀಡಿದ್ದಾರೆ. ಕೊಡಗು ವಾಲಿಬಾಲ್ ಅಸೋಸಿಯೇಷನ್ ವತಿಯಿಂದ ವಿರಾಜಪೇಟೆಯ ಅಂಬೇಡ್ಕರ್ ಭವನದ ಸಭಾಂಗಣದಲ್ಲಿ ಮಂಗಳವಾರದಂದು ನಡೆದ ವಿಶೇಷ ಸಭೆಯಲ್ಲಿ ಪಾಲ್ಗೊಂಡು ವಿವಿಧ ಬೇಡಿಕೆಗಳನ್ನುೊಳಗೊಂಡ ಸಂಸ್ಥೆಯ ಮನವಿ ಪತ್ರವನ್ನು ಸ್ವೀಕರಿಸಿ ಮಾತನಾಡಿದ ಅವರು, ಕೊಡಗಿನಲ್ಲಿ […]

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ: ಕಾವೇರಿ ಕಾಲೇಜಿಗೆ ಪ್ರಥಮ ಸ್ಥಾನ

ಸೋಮವಾರಪೇಟೆಯಲ್ಲಿ ನಡೆದ ಕೊಡಗು ವಿಶ್ವವಿದ್ಯಾಲಯದ ವಾಲಿಬಾಲ್ ಪಂದ್ಯಾಟದಲ್ಲಿ ಗೋಣಿಕೊಪ್ಪಲು ಕಾವೇರಿ ಕಾಲೇಜು ತಂಡವು ಮೊದಲ ಸ್ಥಾನ ಪಡೆದಿದೆ. ಶಹೀಮ್, ಆದರ್ಶ ಬಿದ್ದಪ್ಪ, ಬಸಿತ್, ಅಪ್ಸಲ್, ಮಿರನ್, ಹೃತಿಕ್, ಸಫ್ವಾನ್, ಮತ್ತು ರಿಜ್ವಾನ್ – ಈ ಯುವ ಆಟಗಾರರು ಉತ್ತಮ ಪ್ರದರ್ಶನ ನೀಡಿ ತಂಡಕ್ಕೆ ಪ್ರಥಮ ಬಹುಮಾನ ತಂದುಕೊಟ್ಟಿದ್ದಾರೆ.

ವಾಲಿಬಾಲ್‌ನಲ್ಲಿ ಕೊಡಗಿನ ಹಾಡಿ ಹೈದನ ಸಾಧನೆ – ಸರ್ಕಾರದಿಂದ ಸನ್ಮಾನ…

ಪೊನ್ನಂಪೇಟೆ : ಕ್ರೀಡಾ ಕ್ಷೇತ್ರದ ಸಾಧನೆಗಾಗಿ ತಿತಿಮತಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಜೆ.ಎಂ. ಮನೋಜ್ ಅವರನ್ನು ಸರ್ಕಾರದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. 14 ವರ್ಷದೊಳಗಿನ ಬಾಲಕರ ವಾಲಿಬಾಲ್ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದರು. ಹೀಗಾಗಿ ಬಿರ್ಸಾ ಮುಂಡರವರ 150 ನೇ ಜನ್ಮ ದಿನಾಚರಣೆಯ ಅಂಗವಾಗಿ ಮೈಸೂರಿನ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಗಿರಿಜನ ಹಾಡಿಯಲ್ಲಿ ಹುಟ್ಟಿ ಬೆಳೆದು, ಪ್ರಸ್ತುತ ತಿತಿಮತಿಯ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

ಅಂತಾರಾಷ್ಟ್ರೀಯ ವಾಲಿಬಾಲ್ ಒಕ್ಕೂಟದ ಆಡಳಿತ ಮಂಡಳಿಗೆ ಇಶಾ ಅಂಬಾನಿ ಸೇರ್ಪಡೆ

Isha Ambani

ಅಂತಾರಾಷ್ಟ್ರೀಯ ವಾಲಿಬಾಲ್ ಒಕ್ಕೂಟದ (ಎಫ್ಐವಿಬಿ) ಆಡಳಿತ ಮಂಡಳಿಗೆ ಇಶಾ ಅಂಬಾನಿ (Isha Ambani) ಮತ್ತು ಲೂಯಿಸ್ ಬಾವ್ಡೆನ್ ಸೇರ್ಪಡೆಯಾಗಿದ್ದಾರೆ. 2024-2028ರ ಒಲಿಂಪಿಕ್ಸ್ ಸಾಲಿಗೆ ಈ ನೇಮಕಾತಿಯನ್ನು ಮಾಡಿರುವುದನ್ನು ಎಫ್ಐವಿಬಿ ಘೋಷಿಸಿದೆ. ಈ ಮೂಲಕ ಸಂಸ್ಥೆಯ ಅತ್ಯುನ್ನತ ಮಟ್ಟದಲ್ಲಿ ಹೊಸ ದೃಷ್ಟಿಕೋನ, ವ್ಯವಹಾರ ಕುಶಾಗ್ರಮತಿ ಮತ್ತು ಕ್ರೀಡಾಪಟುಗಳ ಪ್ರಾತಿನಿಧ್ಯವನ್ನು ತರಲಾಗಿದೆ. ಎಫ್ಐವಿಬಿ ಸಂವಿಧಾನದ ವಿಧಿ 2.4.1.5 ರ ಅಡಿಯಲ್ಲಿ ಅಂಬಾನಿ ಮತ್ತು ಬಾವ್ಡೆನ್ ಅವರನ್ನು ನೇಮಿಸಲಾಗಿದೆ, ಇದು ಎಫ್ಐವಿಬಿ ಅಧ್ಯಕ್ಷರು, ವಿಭಿನ್ನ ವರ್ಗಗಳಲ್ಲಿ ನಾಲ್ಕು ಹೆಚ್ಚುವರಿ ಮಂಡಳಿ ಸದಸ್ಯರನ್ನು […]