ಕೊಡಗಿನಲ್ಲಿ ಅನಧಿಕೃತವಾಗಿ ನೀರಿನಲ್ಲಿ ಇಳಿಯುವುದು, ಆಟ ಆಡುವುದು ನಿರ್ಬಂಧ

ಮಡಿಕೇರಿ:- ವಿಪತ್ತು ನಿರ್ವಹಣಾ ಕಾಯ್ದೆ, 2005 ಕಲಂ 34(ಸಿ)ರಲ್ಲಿ ಉಲ್ಲೇಖಿಸಿರುವಂತೆ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 152 ಮತ್ತು 163 ರಲ್ಲಿ ದತ್ತವಾದ ಅಧಿಕಾರದಂತೆ ಸಾರ್ವಜನಿಕ ಹಿತದೃಷ್ಟಿಯಿಂದ ಈ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಕೊಡಗು ಜಿಲ್ಲೆಯಾದ್ಯಂತ ಇರುವ ಜಲಪಾತಗಳು, ಝರಿ, ನದಿ, ತೊರೆ, ಸಾರ್ವಜನಿಕ ಕೆರೆಗಳು, ಅಣೆಕಟ್ಟು, ಜಲಾಶಯದ ಪ್ರದೇಶಗಳಲ್ಲಿ ಸಾರ್ವಜನಿಕರು, ಪ್ರವಾಸಿಗರು ಅನಧಿಕೃತವಾಗಿ ನೀರಿನಲ್ಲಿ (water) ಇಳಿಯುವುದು, ಮುಳುಗು ಹೊಡೆಯುವುದು, ಸಾಹಸ ಚಟುವಟಿಕೆ ನಡೆಸುವುದು, ಈಜುವುದನ್ನು ಮುಂದಿನ ಆದೇಶದವರೆಗೆ […]
ಬೆಂಗಳೂರಿನ ನೀರಿನ ಬಿಕ್ಕಟ್ಟು ಪರಿಹರಿಸಲು ಬೋಸನ್ ವೈಟ್ವಾಟರ್ನಿಂದ ವಿಚಾರ ಸಂಕಿರಣ

ಬೆಂಗಳೂರು: ಎಸ್ಟಿಪಿ ನೀರನ್ನು ಉತ್ತಮ ಗುಣಮಟ್ಟದ ಕುಡಿಯುವ ನೀರಾಗಿ ಪರಿವರ್ತಿಸುವ ವಾಟರ್ ಯುಟಿಲಿಟಿ ಕಂಪನಿ ಬೋಸನ್ ವೈಟ್ ವಾಟರ್, ಏಪ್ರಿಲ್ 16ರಂದು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಸಾಯಿ ವಿಶ್ರಾಮ್ನಲ್ಲಿ “ಸುಸ್ಥಿರ ನೀರಿನ ನಿರ್ವಹಣಾ ಅಭ್ಯಾಸಗಳು” ಎಂಬ ವಿಷಯದ ಕುರಿತು ವಿಚಾರ ಸಂಕಿರಣ ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಅಪಾರ್ಟ್ಮೆಂಟ್ ಸಂಘಗಳು, ನೀರಿನ ಟ್ಯಾಂಕರ್ ನಿರ್ವಾಹಕರು ಮತ್ತು ಸಂಸ್ಕರಿಸಿದ ನೀರಿನ ಕೈಗಾರಿಕಾ ಖರೀದಿದಾರರು ವರ್ತುಲ ಜಲ ನಿರ್ವಹಣೆಯ ಬಗ್ಗೆ ಅಭಿಪ್ರಾಯಗಳನ್ನು ಹಂಚಿಕೊಂಡರು. ಜತೆಗೆ ಬೆಂಗಳೂರಿನ (Bengaluru) ನೀರಿನ ಬಿಕ್ಕಟ್ಟನ್ನು ಪರಿಹರಿಸಲು […]
ವಾಟರ್ ಬಾಟಲಿ ನೀರು ಅಸುರಕ್ಷಿತ! ಹೊರಬಿತ್ತು ಭಯಾನಕ ಸತ್ಯ… ಕೊಡಗಿನ ಬ್ರ್ಯಾಂಡ್ ಹೆಸರು ಸಹ ಬಹಿರಂಗ

ನಾವು ಸೇವಿಸುವ ಆಹಾರಗಳಲ್ಲಿ ಕಲಬೆರಕೆ, ವಿಷಾಂಶ ಹಾಗೂ ಕ್ಯಾನ್ಸರ್ ಕಾರಕ ಅಂಶಗಳ ಬಯಲಾದ ಬೆನ್ನಲ್ಲೇ ಕುಡಿಯುವ ನೀರಿನ (water) ಬಾಟಲಿಯ ಬಹಳಷ್ಟು ಬ್ರ್ಯಾಂಡ್ಗಳು ಅಸುರಕ್ಷಿತ ಎಂಬ ಶಾಕ್ ಸುದ್ದಿಯನ್ನು ಸರಕಾರವೇ ನೀಡಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ರಾಜ್ಯದ ವಿವಿಧೆಡೆ ಬಾಟಲಿ ಕುಡಿಯುವ ನೀರಿನ 255 ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ನಡೆಸಿದೆ. ಸಾಕಷ್ಟು ಕಂಪನಿಗಳ ವಾಟರ್ ಬಾಟಲ್ (Water Bottle) ಅಸುರಕ್ಷಿತ ಮತ್ತು ಕಳಪೆ ಗುಣಮಟ್ಟದಿಂದ ಕೂಡಿರುವುದು ಸಾಬೀತಾಗಿದೆ. ಆಹಾರ ಸುರಕ್ಷತೆ ಮತ್ತು ಔಷಧ […]
ಕೊಡಗಿನಲ್ಲಿ ಕುಡಿಯುವ ನೀರು ಸಮರ್ಪಕ ಪೂರೈಕೆಗೆ ಉಸ್ತುವಾರಿ ಸಚಿವರ ಸೂಚನೆ

ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳದಂತೆ ಮುನ್ನೆಚ್ಚರ ವಹಿಸಬೇಕು. ಕಾಲ ಕಾಲಕ್ಕೆ ಕುಡಿಯುವ ನೀರನ್ನು ನಿರಂತರವಾಗಿ ಪೂರೈಸಬೇಕು. ಸಾರ್ವಜನಿಕರಿಂದ ದೂರು ಬರದಂತೆ ಎಚ್ಚರವಹಿಸಬೇಕು ಎಂದು ಕೊಡಗು (Kodagu) ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ತಾಕೀತು ಮಾಡಿದ್ದಾರೆ. ಬಿಟ್ಟಂಗಾಲದ ಹೆಗ್ಗಡೆ ಸಮಾಜದಲ್ಲಿ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕುಗಳ ಅಧಿಕಾರಿಗಳೊಂದಿಗೆ ಪ್ರಸಕ್ತ ಆರ್ಥಿಕ ವರ್ಷದ ಪ್ರಗತಿ ಸಂಬಂಧಿಸಿದಂತೆ ಮಾಹಿತಿ ಪಡೆದು ಸಚಿವರು ಮಾತನಾಡಿದರು. ತಹಶೀಲ್ದಾರರು ಮತ್ತು ತಾ.ಪಂ.ಇಒಗಳು ಕುಡಿಯುವ ನೀರು ಪೂರೈಕೆ ಸಂಬಂಧಿಸಿದಂತೆ ವಿಶೇಷ ಗಮನಹರಿಸಬೇಕು. ಜೊತೆಗೆ […]