ಅಂಗನವಾಡಿ ಕಾರ್ಯಕರ್ತೆಯರು, ಪೋಷಕರೊಂದಿಗೆ ಪೌಷ್ಟಿಕ ಪುನಶ್ಚೇತನ ಕೇಂದ್ರಕ್ಕೆ ಭೇಟಿ ನೀಡಿದ ಅಧಿಕಾರಿಗಳು

ಮಡಿಕೇರಿ : ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಕಡಿಮೆ ತೂಕದ ಮಕ್ಕಳ ಪೋಷಕರೊಂದಿಗೆ ಪೌಷ್ಟಿಕ ಪುನಶ್ಚೇತನ ಕೇಂದ್ರಕ್ಕೆ (NRC madikeri) ಇತ್ತೀಚಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಪ್ರಸನ್ನ ಕುಮಾರ್, ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಭೇಟಿ ನೀಡಿ ಪೌಷ್ಟಿಕ ಪುನಶ್ಚೇತನ ಕೇಂದ್ರದ ಬಗ್ಗೆ ಮಾಹಿತಿ ನೀಡಿದರು. ಪ್ರತಿ ತಿಂಗಳು ಐದನೇ ತಾರೀಖಿನೊಳಗೆ ಅಂಗನವಾಡಿ ಕೇಂದ್ರದಲ್ಲಿ 0-6 ವರ್ಷದ ಮಕ್ಕಳ ತೂಕ, ಎತ್ತರ, ತೋಳಿನ ಸುತ್ತಳತೆಯನ್ನು ಪರಿಶೀಲಿಸಿ […]
ಮಕ್ಕಂದೂರು, ಮುಕ್ಕೋಡ್ಲು ಗೌಡ ಮಹಿಳಾ ಒಕ್ಕೂಟ ರಚನೆ – ಅಧ್ಯಕ್ಷರಾಗಿ ತೋಟೆರ ನವೀನ ಕುಮಾರಿ ಆಯ್ಕೆ

ಮಡಿಕೇರಿ : ಮಕ್ಕಂದೂರು ಮತ್ತು ಮುಕ್ಕೋಡ್ಲು ಗೌಡ ಮಹಿಳಾ ಒಕ್ಕೂಟ ನೂತನವಾಗಿ ರಚನೆಗೊಂಡಿದ್ದು, ಅಧ್ಯಕ್ಷರಾಗಿ ತೋಟೆರ ನವೀನ ಕುಮಾರಿ ಜಯಪ್ರಕಾಶ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ತೇಲಬೈಲು ಅಸಿಕಾ ದಿನೇಶ ಆಯ್ಕೆಯಾಗಿದ್ದಾರೆ. ಖಜಾಂಚಿಯಾಗಿ ಕೊಟ್ಟಗೇರಿಯನ ಕಲ್ಪನಾ ಪ್ರದೀಪ್, ಉಪಾಧ್ಯಕ್ಷರಾಗಿ ಕುಂಬುಗೌಡನ ಕವಿತಾ ಸುನಿಲ್, ಸಹಕಾರ್ಯದರ್ಶಿಯಾಗಿ ಮಳ್ಳನ ಅನಿತಾ ವಿಜಯಕುಮಾರ್, ಸಂಘಟನಾ ಕಾರ್ಯದರ್ಶಿಯಾಗಿ ಕುಡೆಕಲ್ಲು ಸವಿತಾ ಸಂತೋಷ್ ಹಾಗೂ ಕುಂಬುಗೌಡನ ನಿಶ್ಚಲ್ ಜಗದೀಶ್ ನೇಮಕಗೊಂಡರು. ಸದಸ್ಯರಾಗಿ ಲಕ್ಕಪನ ಸೌಮ್ಯ ವಿಜೇತ, ಹಿರೇಗೌಡನ ಚಲನ ತೀರ್ಥಕುಮಾರ್, ಕೋಳಿಬೈಲು ಅನಿತಾ ರಂಜು, ಮಳ್ಳನ […]