ದೆಹಲಿಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವಕ್ಕೆ ಕರ್ನಾಟಕದ ಪ್ರತಿನಿಧಿಯಾಗಿ ಕೊಡಗಿನ ಯಶಸ್ ರೈ..

ಮಡಿಕೇರಿ : ದೆಹಲಿಯಲ್ಲಿ(Delhi) ನಡೆಯಲಿರುವ ಈ ಬಾರಿಯ ಸ್ವಾತಂತ್ರ್ಯೋತ್ಸವಕ್ಕೆ ಕೊಡಗು ಜಿಲ್ಲೆಯ ಪ್ರತಿನಿಧಿಯಾಗಿ ಮೂರ್ನಾಡುವಿನ ಯಶಸ್ ರೈ(Yashas Rai) ಆಯ್ಕೆಯಾಗಿದ್ದಾರೆ. 15ರಿಂದ 28 ವರ್ಷದೊಳಗಿನವರಿಗೆ ಈ ಅವಕಾಶ ಕಲ್ಪಿಸಲಾಗಿತ್ತು. ನೆಹರು ಯುವ ಕೇಂದ್ರದ ಮೈ ಭಾರತ್ ಪೋರ್ಟಲ್ ಮೂಲಕ ಈ ಆಯ್ಕೆ ನಡೆದಿದೆ. ದೇಶಾದ್ಯಂತ ಸಹಸ್ರಾರು ಮಂದಿ ಯುವಕರು ಪೋರ್ಟಲ್ನಲ್ಲಿ ನೋಂದಾಯಿಸಿಕೊಂಡಿದ್ದರು. ಅದರಲ್ಲಿ ಕರ್ನಾಟಕದ ಪ್ರತಿನಿಧಿಯಾಗಿ ಕೊಡಗಿನ ಯಶಸ್ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಒಬ್ಬರು ಆಯ್ಕೆಯಾಗಿದ್ದಾರೆ. ಯಶಸ್ ರೈ ಮೂರ್ನಾಡುವಿನ ಅಂಗನವಾಡಿ ಕಾರ್ಯಕರ್ತೆ ಬಿ.ಬಿ. ಜಯಂತಿ […]