ಯುವ ಜನತೆಗೆ ಸಹಕಾರಿ ಕ್ಷೇತ್ರದ ಅರಿವು ಕಾರ್ಯಕ್ರಮ

ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಆಂತರಿಕ ಗುಣಮಟ್ಟ ಭರವಸೆ ಕೋಶ, ಅರ್ಥಶಾಸ್ತ್ರ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಯುವ ಜನತೆಗೆ ಸಹಕಾರಿ ಕ್ಷೇತ್ರದ ಅರಿವು ಕಾರ್ಯಕ್ರಮವು (program) ಇತ್ತೀಚೆಗೆ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಗಿಡಕ್ಕೆ ನೀರು ಹಾಕುವುದರ ಮೂಲಕ ಕಾಲೇಜಿನ ಪ್ರಾಂಶುಪಾಲರಾದ ಡಾ.ದಯಾನಂದ.ಕೆ.ಸಿ ಅವರು ಉದ್ಘಾಟಿಸಿದರು. ಕೊಡಗು ಜಿಲ್ಲಾ ಸಹಕಾರಿ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಡಾ ರೇಣುಕಾ ಆರ್.ಎಸ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಸಹಕಾರಿ ಕ್ಷೇತ್ರದ ಮೂಲ ತತ್ವಗಳು, ಸಹಕಾರಿ ಸಂಘಗಳ ಕಾರ್ಯ ಚಟುವಟಿಕೆ, ವಿವಿಧ […]