ಮುಂಗಾರಿಗೆ ಈಗಿನಿಂದಲೇ ಮುನ್ನೆಚ್ಚರಿಕಾ ಕ್ರಮ ವಹಿಸಿ: ಜಿಲ್ಲಾಧಿಕಾರಿ

District Collector

ಮುಂಗಾರು ಸಂಬಂಧ ನೋಡಲ್ ಅಧಿಕಾರಿಗಳು ಹಾಗೂ ಎಂಜಿನಿಯರ್‍ಗಳು ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ‘ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಮುಂಗಾರು ಆರಂಭವಾಗುವ ಸಾಧ್ಯತೆ ಇದೆ. ಆದ್ದರಿಂದ ವ್ಯಾಪಕ ಮಳೆಯಿಂದ ಸಂಭವಿಸಬಹುದಾದ ಅನಾಹುತವನ್ನು ತಡೆಯುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂದರು. ಮುಂಗಾರು ಸಂದರ್ಭದಲ್ಲಿ ಯಾವುದೇ ರೀತಿಯ ಪ್ರಾಣ ಹಾನಿ, […]