ರಾಷ್ಟ್ರೀಯ ಹೆದ್ದಾರಿಯನ್ನು ನುಂಗುತ್ತಿರುವ ಗಿಡಗಂಟಿಗಳಿಂದ ಕಾದಿದೆ ಅಪಾಯ: ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಇದು ಕಾಣುತ್ತಿಲ್ಲವೇಕೆ?

National highway

ಮಡಿಕೇರಿ : ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ (National highway) ವಾಹನ ಸಂಚಾರಕ್ಕೆ ತೊಡಕಾಗುತ್ತಿದೆ, ಮತ್ತು ಅಪಘಾತಕ್ಕೆ ಕಾರಣವಾಗುತ್ತಿದೆ ಎಂಬ ಕಾರಣದಿಂದ ರಸ್ತೆ ಬದಿಯಲ್ಲಿದ್ದ ಹಣ್ಣಿನ ಅಂಗಡಿಗಳನ್ನು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕೆಲವು ದಿನದ ಹಿಂದೆ ತೆರವು ಮಾಡಿದ್ದರು. ಈ ಬಗ್ಗೆ ಸಾರ್ವಜನಿಕ ವಲಯದಲ್ಲೂ ಮೆಚ್ಚುಗೆ ವ್ಯಕ್ತವಾಗಿತ್ತು. ಆದರೆ ಅಸಲಿಯಾಗಿ ವಾಹನಗಳ ಸಂಚಾರಕ್ಕೆ ತೊಡಕಾಗಿರುವ, ಅಪಘಾತಕ್ಕೆ ಕಾರಣವಾಗಿರುವ ಪ್ರಮುಖ ವಿಚಾರದ ಬಗ್ಗೆ ಅಧಿಕಾಗಳು ಗಮನಹರಿಸದಿರುವ ಬಗ್ಗೆ ಜನರಲ್ಲಿ ಅಸಮಾಧಾನ ವ್ಯಕ್ತವಾಗಿದೆ. ರಾಷ್ಟ್ರೀಯ ಹೆದ್ದಾರಿ 275ರಲ್ಲಿ(ಮಡಿಕೇರಿ-ಸಂಪಾಜೆ) ವಿವಿಧೆಡೆ ರಸ್ತೆಯನ್ನ ಕಾಡು […]