ಮಡಿಕೇರಿ : ಕತ್ತಲೆಕಾಡುವಿನ ವಿನಾಯಕ ಸೇವಾ ಟ್ರಸ್ಟ್ ವತಿಯಿಂದ 19ನೇ ವರ್ಷದ ಗೌರಿ ಗಣೇಶೋತ್ಸವ ಆ.27ರಿಂದ 29ರವರೆಗೆ ಜರುಗಲಿದೆ.
27ರಂದು ಬೆಳಗ್ಗೆ 08 ಗಂಟೆಗೆ ಗಣ ಹೋಮ, ಗಣೇಶ ಮೂರ್ತಿ ಪ್ರತಿಷ್ಠಾಪನೆ, 9.15ಕ್ಕೆ ಭಾರತ್ ಮಾತಾ ಪೂಜೆ, ಬಳಿಕ ಗ್ರಾಮಸ್ಥರಿಗೆ ಆಟೋಟ ಸ್ಪರ್ಧೆ ನಡೆಯಲಿದೆ. ಸಂಜೆ 06 ಗಂಟೆಗೆ ಸುಭಾಷ್ ಮತ್ತು ತಂಡದಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
28ರಂದು ಸಂಜೆ 06 ಗಂಟೆಗೆ ಸಾಮೂಹಿಕ ಸತ್ಯನಾರಾಯಣ ಪೂಜೆ, ರಾತ್ರಿ 08 ಗಂಟೆಗೆ ಅನ್ನ ಸಂತರ್ಪಣೆ, 09 ಗಂಟೆಗೆ ಕ್ರೀಡಾಕೂಟ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ. 29ರಂದು ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ, 01 ಗಂಟೆಗೆ ಅನ್ನ ಸಂತರ್ಪಣೆ, 02 ಗಂಟೆಗೆ ಅಲಂಕೃತ ಮಂಟಪದಲ್ಲಿ ಗಣಪತಿ ಮೂರ್ತಿಯ ಶೋಭಾಯಾತ್ರೆ ಬಳಿಕ ಕ್ಲೋಸ್ಬರ್ನ್ ಕೆರೆಯಲ್ಲಿ ವಿಸರ್ಜಿಸಲಾಗುವುದೆಂದು ಟ್ರಸ್ಟ್ ಪ್ರಕಟಣೆ ತಿಳಿಸಿದೆ.





