ಚಿನ್ನಸ್ವಾಮಿ ಕಾಲ್ತುಳಿತ ದುರಂತದ ಬಗ್ಗೆ ಮೌನ ಮುರಿದ ರಾಹುಲ್ ದ್ರಾವಿಡ್: ಹೇಳಿದ್ದೇನು?

Rahul Dravid

Share this post :

ಕ್ರಿಕೆಟ್ ಲೋಕದ ಲೆಜೆಂಡರಿ ಆಟಗಾರ ರಾಹುಲ್ ದ್ರಾವಿಡ್ (Rahul Dravid) ಅವರು ಕೊನೆಗೂ ಮೌನ ಮುರಿದು ಘಟನೆ ಬಗ್ಗೆ ಸಂತಾಪ ಸೂಚಿಸಿದ್ದಾರೆ. ನಾನು ಕೂಡ ಬೆಂಗಳೂರಿನವನು ಬೆಂಗಳೂರಿನಲ್ಲಿರುವ ಜನರಿಗೆ ಕ್ರೀಡೆಯ ಬಗ್ಗೆ ಪ್ರೀತಿ ಇದೆ. ಜನರು ಕ್ರಿಕೆಟ್ ಮಾತ್ರವಲ್ಲ ಎಲ್ಲಾ ಕ್ರೀಡೆಯನ್ನು ಪ್ರೀತಿಸುತ್ತಾರೆ. ಫುಟ್ಬಾಲ್ ಇರಲ್ಲಿ ಕಬಡ್ಡಿ ಇರಲಿ ಎಲ್ಲಾ ತಂಡವನ್ನು ಜನರು ಫಾಲೋ ಮಾಡುತ್ತಾರೆ .

ಈ ಬಾರಿ ಕಪ್ ಗೆದ್ದು 18 ವರ್ಷಗಳ ನಂತರ ಇದರ ಸೆಲೆಬ್ರೇಶನ್ಗಾಗಿ ತಂಡ ಬೆಂಗಳೂರಿಗೆ ಬಂದಿತ್ತು ಈ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಹೊರಭಾಗದಲ್ಲಿ ಉಂಟಾದ ಕಾರ್ತುಳಿತದಲ್ಲಿ 11 ಜನರು ಮೃತಪಟ್ಟಿದ್ದಾರೆ ಹಾಗೂ 50 ಜನರು ಗಾಯಗೊಂಡಿದ್ದಾರೆ. ಆರ್ ಸಿ ಬಿ (RCB) ಅಂದ್ರೆ ಎಲ್ಲರಿಗೂ ಅಚ್ಚುಮೆಚ್ಚಿನ ತಂಡ ಆದರೆ ಈಗ ನಡೆದಿರುವಂತಹ ಘಟನೆ ನಿಜಕ್ಕೂ ದುರದೃಷ್ಟಕರವಾಗಿದೆ ಎಂದು ಸಂತಾಪವನ್ನು ಸೂಚಿಸಿದ್ದಾರೆ.

ವಿಧಾನಸೌಧದಲ್ಲಿ ಕ್ರೀಡಾಪಟುಗಳನ್ನು ಸನ್ಮಾನ ಮಾಡಲಾಯಿತು ಅಲ್ಲಿಯೂ ಹೆಚ್ಚು ಜನ ಸೇರಿದರೂ ಸಹ ಯಾವುದೇ ತೊಂದರೆ ಉಂಟಾಗಿರಲಿಲ್ಲ. ಆದರೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಭಾಗದಲ್ಲಿ ಸಾಕಷ್ಟು ಆಚಾತುರ್ಯ ನಡೆಯಿತು. ಸ್ಟೇಡಿಯಂ ಹೊರಭಾಗದಲ್ಲಿ ಸ್ಲಾಬ್ ಕುಸಿತದಿಂದ ಜನರು ಆತಂಕಗೊಂಡರು ಈ ವೇಳೆ ದುರಂತ ಸಂಭವಿಸಿದೆ.