ಮಡಿಕೇರಿ : ದೆಹಲಿಯಲ್ಲಿ(Delhi) ನಡೆಯಲಿರುವ ಈ ಬಾರಿಯ ಸ್ವಾತಂತ್ರ್ಯೋತ್ಸವಕ್ಕೆ ಕೊಡಗು ಜಿಲ್ಲೆಯ ಪ್ರತಿನಿಧಿಯಾಗಿ ಮೂರ್ನಾಡುವಿನ ಯಶಸ್ ರೈ(Yashas Rai) ಆಯ್ಕೆಯಾಗಿದ್ದಾರೆ.
15ರಿಂದ 28 ವರ್ಷದೊಳಗಿನವರಿಗೆ ಈ ಅವಕಾಶ ಕಲ್ಪಿಸಲಾಗಿತ್ತು. ನೆಹರು ಯುವ ಕೇಂದ್ರದ ಮೈ ಭಾರತ್ ಪೋರ್ಟಲ್ ಮೂಲಕ ಈ ಆಯ್ಕೆ ನಡೆದಿದೆ. ದೇಶಾದ್ಯಂತ ಸಹಸ್ರಾರು ಮಂದಿ ಯುವಕರು ಪೋರ್ಟಲ್ನಲ್ಲಿ ನೋಂದಾಯಿಸಿಕೊಂಡಿದ್ದರು. ಅದರಲ್ಲಿ ಕರ್ನಾಟಕದ ಪ್ರತಿನಿಧಿಯಾಗಿ ಕೊಡಗಿನ ಯಶಸ್ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಒಬ್ಬರು ಆಯ್ಕೆಯಾಗಿದ್ದಾರೆ. ಯಶಸ್ ರೈ ಮೂರ್ನಾಡುವಿನ ಅಂಗನವಾಡಿ ಕಾರ್ಯಕರ್ತೆ ಬಿ.ಬಿ. ಜಯಂತಿ ಹಾಗೂ ಲವಕುಮಾರ್ ಅವರ ಪುತ್ರ. ಸುಳ್ಯ ಕೆವಿಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಆಗಸ್ಟ್ 15ರಂದು ದೆಹಲಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಕಾರ್ಯಕ್ರಮದಲ್ಲಿ ಇವರು ಪಾಲ್ಗೊಳ್ಳಲಿದ್ದಾರೆ.
