ಮಡಿಕೇರಿ : ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ ಸಮಿತಿ ವತಿಯಿಂದ ಕನ್ನಡ ಭವನದ ಕೊಡಗು ಜಿಲ್ಲಾ ಘಟಕ ಹಾಗೂ ಕನ್ನಡ ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ ಮಾ.೨೩ ರಂದು ಮಡಿಕೇರಿಯಲ್ಲಿ ನಡೆಯಲಿದೆ.
ನಗರದ ಪತ್ರಿಕಾ ಭವನದಲ್ಲಿ ಮಧ್ಯಾಹ್ನ ೨ ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಕನ್ನಡ ಭವನದ ಸ್ಥಾಪಕ ಸಂಚಾಲಕ ಡಾ.ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾರಾಣಿ ಟೀಚರ್ ಉದ್ಘಾಟಿಸಲಿದ್ದು, ಕನ್ನಡ ಭವನದ ಕೊಡಗು ಜಿಲ್ಲಾಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಬಿ.ಜಿ.ಅನಂತಶಯನ, ಹಿರಿಯ ಸಾಹಿತಿ ಭಾರದ್ವಾಜ್ ಕೆ.ಆನಂದತೀರ್ಥ, ಕನ್ನಡ ಭವನ ಕೇಂದ್ರ ಸಮಿತಿ ಉಪಾಧ್ಯಕ್ಷ ಕೆ.ಪಿ. ರಾಜೇಶ್ ಚಂದ್ರ ಪಾಲ್ಗೊಳ್ಳಲಿದ್ದಾರೆ. ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾಧ್ಯಕ್ಷ ವಿರಾಜ್ ಅಡೂರು ಪ್ರಾಸ್ತಾವಿಕ ನುಡಿಯಾಡಲಿದ್ದಾರೆ.
ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾಧ್ಯಕ್ಷೆ ಎಂ.ಎ.ರುಬೀನಾ, ಜಿಲ್ಲಾ ಕೋಶಾಧಿಕಾರಿ ಚಂದನ್ ನಂದರಬೆಟ್ಟು ಸೇರಿದಂತೆ ಕನ್ನಡ ಭವನ ಹಾಗೂ ಚುಟುಕು ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
::: ಪ್ರಶಸ್ತಿ ಪ್ರದಾನ :::
ಕಾಸರಗೋಡಿನ ಕನ್ನಡ ಭವನದ ‘ಕನ್ನಡ ಪಯಸ್ವಿನಿ ಪ್ರಶಸ್ತಿ-೨೦೨೫’ನ್ನು ಬೊಳ್ಳಜಿರ ಬಿ.ಅಯ್ಯಪ್ಪ, ಎಂ.ಎ.ರುಬೀನಾ, ಬಿ.ಜಿ.ಅನಂತಶಯನ, ಭಾರದ್ವಾಜ್ ಕೆ.ಆನಂದತೀರ್ಥ, ನಾಗೇಶ್ ಕಾಲೂರು, ಕೊಟ್ಟುಕತ್ತಿರ ಯಶೋದ ಪ್ರಕಾಶ್, ಹೆಚ್.ಜಿ.ಯೋಗೇಶ್, ತೆನ್ನೀರ ಟೀನಾ ಚಂಗಪ್ಪ, ಅಜ್ಜಿಕುಟ್ಟಿರ ಭವ್ಯ ಬೋಪಣ್ಣ, ಬಿ.ಆರ್.ಬಸವರಾಜ್, ಚಂದನ್ ನಂದರಬೆಟ್ಟು, ಬೊಟ್ಟೋಳಂಡ ನಿವ್ಯ ದೇವಯ್ಯ ಹಾಗೂ ಕನ್ನಡ ಭವನದ ‘ಭರವಸೆಯ ಬೆಳಕು’ ಪ್ರಶಸ್ತಿಯನ್ನು ಯೋಗಪಟು ಬಿ.ಕೆ.ಸಿಂಚನ ಅವರಿಗೆ ಪ್ರದಾನ ಮಾಡಲಾಗುವುದು.
ಹಿರಿಯ ಸಾಹಿತಿ ಪಿ.ವಿ.ಪ್ರದೀಪ್ ಕುಮಾರ್, ಜಯಾನಂದ ಪೆರಾಜೆ, ಡಾ.ಶಾಂತ ಪುತ್ತೂರು, ವಿರಾಜ್ ಅಡೂರು, ಡಾ.ಕೊಳ್ಚಪ್ಪೆ ಗೋವಿಂದ ಭಟ್, ಡಾ.ಟಿ.ತ್ಯಾಗರಾಜ್, ರೇಖಾ ಎಸ್.ರಾವ್, ಡಾ.ಹೇಮಂತ್ ಕುಮಾರ್, ಕೆ.ಪಿ.ರಾಜೇಶ್ಚಂದ್ರ, ವಸಂತ್ ಕೆರೆಮನೆ ಅವರಿಗೆ ‘ಕೊಡಗು ಜಿಲ್ಲಾ ಸಾಹಿತ್ಯ ಪ್ರಶಸ್ತಿ-೨೦೨೫’ ನೀಡಿ ಗೌರವಿಸಲಾಗುವುದು. ಅಲ್ಲದೆ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿಯ ಸ್ಥಾಪಕ ಸಂಚಾಲಕ ಡಾ.ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾರಾಣಿ ಟೀಚರ್ ಅವರಿಗೆ ‘ಗಡಿನಾಡ ಚೇತನ ವಿಶೇಷ ಗೌರವ ಪ್ರಶಸ್ತಿ’ ಪ್ರದಾನ ಮಾಡಲಾಗುವುದು.
::: ಪುಸ್ತಕ ಬಿಡುಗಡೆ :::
ಇದೇ ಸಂದರ್ಭ ಸಾಹಿತಿ ಅಜ್ಜಿಕುಟ್ಟೀರ ಭವ್ಯ ಬೋಪಣ್ಣ ಅವರ ‘ದೇವನೆಲೆರ ಭೀರ್ಯ’ ಹಾಗೂ ಲೇಖಕಿ ತೆನ್ನಿರ ಟೀನಾ ಚಂಗಪ್ಪ ಅವರ ‘ಮನದಾಳದ ಹೆಜ್ಜೆ’ ಕೃತಿಗಳು ಬಿಡುಗಡೆಯಾಗಲಿದೆ.
::: ಪದಗ್ರಹಣ :::
ಕನ್ನಡ ಭವನದ ಜಿಲ್ಲಾಧ್ಯಕ್ಷರು ಹಾಗೂ ಚುಟುಕು ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷರೂ ಆಗಿರುವ ಬೊಳ್ಳಜಿರ ಬಿ.ಅಯ್ಯಪ್ಪ, ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾಧ್ಯಕ್ಷೆ ಎಂ.ಎ.ರುಬೀನಾ, ಕನ್ನಡ ಭವನದ ಉಪಾಧ್ಯಕ್ಷೆ ತೆನ್ನಿರ ಟೀನಾ ಚಂಗಪ್ಪ, ಪ್ರಧಾನ ಕಾರ್ಯದರ್ಶಿ ಚಂದನ್ ನಂದರಬೆಟ್ಟು, ಖಜಾಂಚಿ ವಿನೋದ್ ಕುಡ್ತೇಕರ್, ನಿರ್ದೇಶಕರುಗಳಾದ ಅರುಣ್ ಕುಮಾರ್, ಎಸ್.ಎ.ರಿಶಾ, ಹರ್ಷಿತಾ ಶೆಟ್ಟಿ, ಕೆ.ಎಂ. ಸಂಕೇತ್, ಮಾಗಲು ಲೋಹಿತ್, ಲೋಕೇಶ್ ಕಾಟಕೇರಿ, ಎಸ್.ಆರ್. ವತ್ಸಲ, ಪೇರಿಯಂಡ ಜಯಂತಿ ಉತ್ತಪ್ಪ, ಬಿ.ಎನ್. ಚಿತ್ರಾ ಸುಜನ್, ಎಂ.ಎಂ. ಅಬ್ದುಲ್ಲಾ, ವಿಶ್ವ ಕುಂಬೂರು, ಕೆ.ಎಂ.ವಿನೋದ್, ಚುಟುಕು ಸಾಹಿತ್ಯ ಪರಿಷತ್ ಉಪಾಧ್ಯಕ್ಷೆ ಪೇರಿಯಂಡ ಯಶೋಧ, ಕಾರ್ಯದರ್ಶಿ ಬೊಟ್ಟೋಳಂಡ ನಿವ್ಯಾ ಕಾವೇರಮ್ಮ, ಕಾರ್ಯಕಾರಿಣಿ ಸದಸ್ಯರಾದ ಕರವಂಡ ಸೀಮಾ ಗಣಪತಿ, ಪಳಂಗೀಯಂಡ ಶರತ್ ಬೋಪಣ್ಣ, ಕಿಶೋರ್ ರೈ ಕತ್ತಲೆಕಾಡು, ಕೆ.ಎ.ಸಂಕೇತ್, ಹೇಮಂತ್ ಪಾರೇರ, ಪಂದ್ಯಂಡ ರೇಣುಕಾ ಸೋಮಯ್ಯ, ಅಮ್ಮಾಟಂಡ ವಿಂಧ್ಯಾ ದೇವಯ್ಯ, ಮೊಣ್ಣಂಡ ವಿನು ಕಾರ್ಯಪ್ಪ, ಕಾಣತಂಡ ಭವ್ಯ ದೇವಯ್ಯ, ಉಡುವೆರ ರೇಖಾ ರಘು, ಕೆ.ಎಂ.ವಿನೋದ್ ಪದ ಸ್ವೀಕಾರ ಮಾಡಲಿದ್ದಾರೆ.
::: ಕವನ ವಾಚನ :::
ಹಿರಿಯ ಕವಿ ನಾಗೇಶ್ ಕಾಲೂರು ಅವರ ಅಧ್ಯಕ್ಷತೆಯಲ್ಲಿ ಸುಮಾರು ೩೫ಕ್ಕೂ ಹೆಚ್ಚು ಚುಟುಕು ಕವಿಗಳು ಕವನ ವಾಚನ ಮಾಡಲಿದ್ದಾರೆ ಎಂದು ಕನ್ನಡ ಭವನದ ಜಿಲ್ಲಾಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಹಾಗೂ ಚುಟುಕು ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷೆ ಎಂ.ಎ.ರುಬೀನಾ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.